ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ನಡೆದಿದ್ದ ಹತ್ತನೇ ತರಗತಿ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಈ ಶಿಸ್ತು ಕ್ರಮವು ವಸತಿ ನಿಲಯಗಳ ಸುರಕ್ಷತೆ ಮತ್ತು ಸಿಬ್ಬಂದಿಯ ಜವಾಬ್ದಾರಿಯ ಕುರಿತು ತನಿಖೆ ಪ್ರಗತಿಯಲ್ಲಿರುವ ಬೆನ್ನಲ್ಲೇ ಹೊರಬಿದ್ದಿದೆ.
ಕಾನಸೂರು ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು
