ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಮಾಜಾಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ; ಸಂಚಾರ ಸ್ಥಗಿತ

Pakka News Web • 25 ಜೂನ್ 2026,

ಕಾರವಾರ ತಾಲೂಕಿನ ಮಾಜಾಳಿಯ ಬ್ರಾಹ್ಮಣವಾಡಾದಲ್ಲಿ ಮಳೆ-ಗಾಳಿಗೆ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಗುರುವಾರ ಉರುಳಿ ಬಿದ್ದಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಇದರಿಂದಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮರ ಧರೆಗುರುಳಿದೆ ಎನ್ನಲಾಗಿದೆ.

ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಜೂನ್ 29ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಜಾಗರೂಕರಾಗಿರುವಂತೆ ಜಿಲ್ಲಾಡಳಿತ ಸಹ ಸೂಚಿಸಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250