ಕಾರವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ನಾಲ್ವರು ಅಧಿಕಾರಿಗಳ ತಂಡವು ತಹಶೀಲ್ದಾರ್ ನಿಶ್ಚಲ್ ನೊರೊನ್ಹಾ ಅವರ ಕೊಠಡಿಗೆ ತೆರಳಿ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಕಚೇರಿಯ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಕೆಎ-01-ಜಿ-5857 ನೋಂದಣಿ ಸಂಖ್ಯೆಯ ವಾಹನದಲ್ಲಿ ಆಗಮಿಸಿದ ಲೋಕಾಯುಕ್ತ ತಂಡವು ಕಚೇರಿಯಲ್ಲಿ ಪರಿಶೀಲನೆ ಮುಂದುವರಿಸಿದೆ. ಕಾರ್ಯಾಚರಣೆಗೆ ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಇದೇ ರೀತಿ ರಾಜ್ಯ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಚೇರಿಗೆ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
